ವೃದ್ದೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
ನಾಗಮಂಗಲ, ಜೂ.23: ವೃದ್ದೆಯನ್ನು ಕೊಲೆಗೈದು ಚಿನ್ನಾಭರಣ ದೋಚಿರುವ ಘಟನೆ ತಾಲೂಕಿನ ಕರಿಕ್ಯಾತನಹಳ್ಳಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಹನುಮೇಗೌಡರ ಹೆಂಡತಿ ಜಯಮ್ಮ(70) ಕೊಲೆಯಾದ ವೃದ್ಧೆ. ಮನೆಯ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳ ಈ ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ.
ವೃದ್ಧೆಯ ಮೈಮೇಲಿದ್ದ ಸುಮಾರು 75 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಲಾಗಿದೆ ಎನ್ನಲಾಗಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story