ಬೆಂಗಳೂರು: ಮತ್ತೋರ್ವ ಪಿಎಸ್ಸೈಗೆ ಕೊರೋನ ಸೋಂಕು ದೃಢ
ಬೆಂಗಳೂರು, ಜೂ.30: ಕೊರೋನ ಸೈನಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇಲ್ಲಿನ ಉಪ್ಪಾರ ಪೇಟೆ ಪೊಲೀಸ್ ಠಾಣೆಯ ಪಿಎಸ್ಸೈಯೊಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿತ್ತು. ಹೀಗಾಗಿ, ಅವರ ಜೊತೆ ಸಂಪರ್ಕ ಹೊಂದಿದ್ದವರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸದ್ಯ ಪಿಎಸ್ಸೈಗೆ ಸೋಂಕು ಇರುವುದು ದೃಢವಾಗಿದ್ದು, ಸೋಂಕಿತ ಪಿಎಸ್ಸೈ ಅವರನ್ನ ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಿ ಸಾರ್ವಜನಿಕರ ಸಂಪರ್ಕ ನಿಷೇಧಿಸಲಾಗಿದೆ.
Next Story