ಹಸಿವಿನಿಂದ ಕೋವಿಡ್ ಸೋಂಕಿತ ವೃದ್ಧ ಸಾವು: ಕುಟುಂಬಸ್ಥರು, ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ತನಿಖೆಗೆ ಆದೇಶಿಸಿದ ಬಳ್ಳಾರಿ ಜಿಲ್ಲಾಡಳಿತ
ಸಾಂದರ್ಭಿಕ ಚಿತ್ರ
ಬಳ್ಳಾರಿ, ಆ.18: ಕುಟುಂಬಸ್ಥರು ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೊರೋನ ಸೋಂಕಿತ ವೃದ್ಧರೊಬ್ಬರು ಹಸಿವಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾದ ಹೃದಯವಿದ್ರಾವಕ ಘಟನೆ ನಡೆದಿದೆ.
ಬಳ್ಳಾರಿಯ ಟಿ ಬೆಳಗಲ್ಲು ಗ್ರಾಮದಲ್ಲಿ ಪ್ರಕರಣ ನಡೆದಿದೆ. ಸೋಂಕಿತ ವ್ಯಕ್ತಿಯಿಂದ ನಮಗೂ ರೋಗ ಬರಬಹುದೆಂದು ಕುಟುಂಬಸ್ಥರು ಆತನನ್ನು ಮನೆಯಲ್ಲಿಯೇ ಬಿಟ್ಟು, ಬೇರೆ ಕಡೆಗೆ ಹೋಗಿ ನೆಲೆಸಿದ್ದಾರೆ. ಇದರಿಂದಾಗಿ ಸಮಯಕ್ಕೆ ಸರಿಯಾಗಿ ಊಟ ಸಿಗದೆ ಹಸಿವಿನಿಂದ ವೃದ್ಧ ಸಾವನ್ನಪ್ಪಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
ಕೋವಿಡ್ ಸಹಾಯವಾಣಿಗೆ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಸ್ಥಳೀಯರು ಕೆಲವು ಬಾರಿ ಊಟ ಕೊಟ್ಟಿದ್ದಾರೆ. ಆದರೆ, ರಾತ್ರಿಯೆಲ್ಲ ಊಟಕ್ಕಾಗಿ ಕೂಗುತ್ತಿದ್ದ. ಹೀಗಾಗಿ ಸೂಕ್ತ ಸಮಯದಲ್ಲಿ ಊಟ ಹಾಗೂ ಚಿಕಿತ್ಸೆ ಸಿಗದ ಕಾರಣ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಬಳ್ಳಾರಿ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.
Next Story