ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ಮಾಡಿದ ಬಿ.ಸಿ.ಪಾಟೀಲ್
ಹೊಸದಿಲ್ಲಿ, ಸೆ.9: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಬುಧವಾರ ಭೇಟಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದರು.
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾದಂತೆ ರೈತರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಕೃಷಿ ಸಚಿವರ ಸೇವೆಯನ್ನು ಜೆ.ಪಿ.ನಡ್ಡಾ ಶ್ಲಾಘಿಸಿದರು.
ರೈತ ಬೆಳೆ ಸಮೀಕ್ಷೆ ಆ್ಯಪ್, ಅಗ್ರಿ ಸ್ಟಾರ್ಟಪ್ ಸೇರಿದಂತೆ ಹಲವಾರು ಪ್ರಗತಿಪರ ಯೋಜನೆಗಳನ್ನು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಿ ಮೆಚ್ಚುಗೆ ವ್ಯಕ್ತವಾಗಿದ್ದರಿಂದ ದೇಶದ ಇತರೆ ರಾಜ್ಯಗಳಲ್ಲಿಯೂ ಅಳವಡಿಕೆಗೆ ಚಿಂತನೆ ನಡೆಸಲಾಗಿರುವ ಬಗ್ಗೆಯೂ ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಕರ್ನಾಟಕದ ರಾಜಕೀಯ ವಿದ್ಯಮಾನವನ್ನು ಹಂಚಿಕೊಂಡ ಜೆ.ಪಿ.ನಡ್ಡಾ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಬಗ್ಗೆಯೂ ಬಿ.ಸಿ.ಪಾಟೀಲ್ ಜೊತೆ ಚರ್ಚಿಸಿದರು.
Next Story