ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸದ್ಬಳಕೆ ಸಂಬಂಧ ಸೂಕ್ತ ಕ್ರಮ: ಡಾ.ಪಿ.ಎಸ್.ಹರ್ಷ
ಬೆಂಗಳೂರು, ಸೆ.11: ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಬಳಕೆ ಸಂಬಂಧ ಶೀಘ್ರವೇ ಸಭೆ ಸೇರಿ ಯೋಜನೆಯೊಂದನ್ನು ರೂಪಿಸಲಾಗುವುದೆಂದು ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಭರವಸೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗಾಗಿ ಮೀಸಲಿರಿಸಿದ್ದ ಎರಡು ಕೋಟಿ ರೂ.ವನ್ನು ಸದ್ಬಳಕೆ ಕುರಿತಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಇಲಾಖೆಗೆ ಪತ್ರ ಬರೆದಿದ್ದಾರೆ. ಆಯುಕ್ತ ಡಾ.ಪಿ.ಎಸ್.ಹರ್ಷ ಈ ಬಗ್ಗೆ ಸಭೆ ಸೇರಿ ಸೂಕ್ತ ಕಾರ್ಯಯೋಜನೆಯನ್ನು ರೂಪಿಸಲಾಗುವುದೆಂದು ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆಯಲ್ಲಿಯೂ ಅಸಂಘಟಿತ ಪತ್ರಿಕಾ ವಿತರಕರಿಗೆ ಸೌಲಭ್ಯ ಕೊಡಿಸುವಂತೆ ಕಾರ್ಯನಿರತ ಪತ್ರಕರ್ತರ ಸಂಘ ಪತ್ರದ ಮುಖೇನ ಮನವಿ ಮಾಡಿದೆ. ಈ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.
Next Story