ಉತ್ತರ ಒಳನಾಡಿನಲ್ಲಿ ಮಾನ್ಸೂನ್ ಚುರುಕು: ಕರಾವಳಿ ಜಿಲ್ಲೆಗಳಲ್ಲಿ ಸೆ.19ರವರೆಗೂ ವ್ಯಾಪಕ ಮಳೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.15: ಮಂಗಳವಾರ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಒಳನಾಡಿನಲ್ಲಿ ಬಹುತೇಕ ಎಲ್ಲೆಡೆ ಮಳೆ ಸುರಿದಿದೆ. ಉತ್ತರ ಒಳನಾಡಿನಲ್ಲಿಯೂ ಮಾನ್ಸೂನ್ ಚುರುಕಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಸೆ.19ರವರೆಗೂ ವ್ಯಾಪಕ ಮಳೆಯಾಗಲಿದೆ. ಸೆ.16 ಮತ್ತು 17ರಂದು ಯೆಲ್ಲೋ ಅಲರ್ಟ್, ಸೆ.18-19ರಂದು ಮಳೆ ಪ್ರಮಾಣ ಏರಿಕೆಯಾಗಲಿದ್ದು, ಆರೇಂಜ್ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಉತ್ತರ ಒಳನಾಡಿನಲ್ಲಿಯೂ ಸೆ.19ರವರೆಗೆ ವಿವಿಧೆಡೆ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಇಂದು ಆರೇಂಜ್ ಅಲರ್ಟ್ ನೀಡಲಾಗಿದೆ. ಸೆ.16ರಿಂದ 19ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
ಒಳನಾಡಿನಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಸೆ.18-19ರಂದು ಭಾರಿ ಮಳೆ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಹಾಗೆಯೇ ಬೆಂಗಳೂರಿನಲ್ಲಿ ಸೆ.16 ಮತ್ತು 17ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.