ಲಂಚಕ್ಕೆ ಬೇಡಿಕೆ: ಕೃಷಿ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ
ಕಲಬುರ್ಗಿ, ಸೆ.15: ರೈತರಿಗೆ ನೀಡಿದ್ದ ಸಲಕರಣೆಗಳ ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಹಾಯ ಕೃಷಿ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಜೇವರ್ಗಿ ಸಹಾಯಕ ಕೃಷಿ ನಿರ್ದೇಶಕ ಸುನೀಲಕುಮಾರ ಯರಗೋಳ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜೇವರ್ಗಿ ರೈತರೊಬ್ಬರ ಬಿಲ್ ಪಾಸ್ ಮಾಡಲು 1.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ ಮುಂಗಡವಾಗಿ 50 ಸಾವಿರ ಹಣವನ್ನು ಪಡೆಯುತ್ತಿದ್ದ ವೇಳೆ ನಗರದ ಕನ್ನಡ ಭವನದ ಬಳಿ ಎಸಿಬಿ ಡಿವೈಎಸ್ಪಿ ಮಹೇಶ ಮೇಘಣ್ಣವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Next Story