ಆಂಬ್ಯುಲೆನ್ಸ್ ಚಾಲಕ ಅಝ್ಮತ್ ಕೋವಿಡ್ ನಿಂದ ನಿಧನ: ಸಚಿವ ಶ್ರೀರಾಮುಲು ಸಂತಾಪ
ಬೆಂಗಳೂರು, ಸೆ.16: ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಸರಕಾರಿ ಆಂಬ್ಯುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಝ್ಮತ್ ಅವರು ಇಂದು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಝ್ಮತ್ ಅವರು ಕೋವಿಡ್ ವಿರುದ್ಧದ ಸಮರದಲ್ಲಿ ಮುಂಚೂಣಿ ಹೋರಾಟಗಾರರಾಗಿ ಸತತವಾಗಿ ಕಾರ್ಯನಿರ್ವಹಿಸಿದ್ದರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಇಂತಹ ನಿಸ್ವಾರ್ಥ ಸೇನಾನಿಗಳು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವುದರಿಂದಲೇ ಸಾವಿರಾರು ರೋಗಿಗಳ ಜೀವ ಉಳಿಯುತ್ತಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ. ಅವರ ಕುಟುಂಬಕ್ಕೆ ಸರಕಾರದಿಂದ ಸಿಗಬೇಕಾದ ಎಲ್ಲ ಸವಲತ್ತುಗಳು ಮತ್ತು ಪರಿಹಾರಗಳನ್ನು ಶೀಘ್ರವಾಗಿ ತಲುಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Next Story