ಸೆ.22ರಿಂದ ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭ
ಬೆಂಗಳೂರು, ಸೆ.18: ಕೋವಿಡ್-19 ಹಾಗೂ ಲಾಕ್ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸ್ಥಗಿತಗೊಂಡಿದ್ದ ಅಂತರ್ ರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸೆ.22 ರಿಂದ ಮರು ಆರಂಭಿಸಲಾಗುತ್ತಿದೆ.
ಕೋವಿಡ್-19 ಲಾಕ್ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಹಾರಾಷ್ಟ್ರ ರಾಜ್ಯಕ್ಕೆ ಬೆಂಗಳೂರು, ದಾವಣಗೆರೆ, ಮಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ.
ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿರುತ್ತದೆ. ಮುಂಗಡ ಆಸನಗಳನ್ನು www.ksrtc.in ವೆಬ್ಸೈಟ್ ಮತ್ತು ನಿಗಮದ/ಫ್ರಾಂಚೈಸಿ ಕೌಂಟರ್ ಗಳ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ. ಪ್ರಯಾಣಿಕರು ಸದರಿ ಸೌಲಭ್ಯದ ಸದುಪಯೋಗ ಪಡೆಯಲು ಕೋರಲಾಗಿದೆ.
Next Story