ಸೆ.25ರ ಭಾರತ್ ಬಂದ್ಗೆ ನಮ್ಮ ಸಹಕಾರವಿಲ್ಲ: ಹೋಟೆಲ್ ಮಾಲಕರ ಸಂಘ
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.22: ಭೂ ಸುಧಾರಣೆ ಕಾಯ್ದೆ ವಿರೋಧಿಸಿ ವಿವಿಧ ಸಂಘ ಸಂಸ್ಥೆಗಳು ಸೆ.25 ರಂದು ಹಮ್ಮಿಕೊಂಡಿರುವ ಭಾರತ್ ಬಂದ್ಗೆ ಬೆಂಗಳೂರು ಹೋಟೆಲ್ಗಳು ಇದಕ್ಕೆ ಸಹಕಾರ ನೀಡುವುದಿಲ್ಲ ಎಂದು ಬೆಂಗಳೂರು ಹೋಟೆಲ್ ಮಾಲಕರ ಸಂಘದ ಅಧ್ಯಕ್ಷ ಪಿ.ಸಿ ರಾವ್ ಸ್ಪಷ್ಟಪಡಿಸಿದ್ದಾರೆ.
ಸೆ.25ರಂದು ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಕರ್ನಾಟಕದ ರೈತ ಸಂಘ, ದಲಿತ ಸಂಘ ಸೇರಿದಂತೆ ಪಂಜಾಬ್ ಹಾಗೂ ಹರಿಯಾಣದ ಹಲವು ಸಂಘಗಳು ಭಾರತ್ ಬಂದ್ಗೆ ಕರೆ ನೀಡಿರುವುದನ್ನು ನಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೊರೋನದಿಂದ ಹೋಟೆಲ್ಗಳಿಗೆ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ತಿಂಗಳ ಹಿಂದೆಯಷ್ಟೇ ಪೂರ್ಣ ಪ್ರಮಾಣದಲ್ಲಿ ಹೋಟೆಲ್ ತೆರೆಯಲು ಸರಕಾರ ಅನುಮತಿ ನೀಡಿತ್ತು. ಹಿಂದಿನ 6 ತಿಂಗಳ ಕಾಲ ಹೋಟೆಲ್ ಉದ್ಯಮ ನಷ್ಟದಲ್ಲಿತ್ತು. ಹೀಗಾಗಿ ಹೋಟೆಲ್ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
Next Story