ಶಿವಮೊಗ್ಗ: ದ್ವಿಚಕ್ರ ವಾಹನಕ್ಕೆ ಜೀಪ್ ಢಿಕ್ಕಿ; ಯುವಕ ಮೃತ್ಯು
ಶಿವಮೊಗ್ಗ, ಸೆ.24: ಆಯನೂರು ಸರ್ಕಲ್ ನಲ್ಲಿ ದ್ವಿಚಕ್ರ ವಾಹನಕ್ಕೆ ಜೀಪ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
ನವುಲೆಯ ರವಿಕುಮಾರ್ (20) ಮೃತ ಯುವಕ. ಸ್ನೇಹಿತನೊಬ್ಬನ ಮನೆಗೆ ಹೋಗಿ ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಆಯನೂರು ಸರ್ಕಲ್ ಬಳಿ ಎದುರಿನಿಂದ ವೇಗವಾಗಿ ಬಂದ ಜೀಪ್ ರವಿಕುಮಾರ್ ಡಿಯೋ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ತಲೆ ಮತ್ತು ಎದೆ ಭಾಗಕ್ಕೆ ಗಂಭೀರ ಗಾಯವಾಗಿದ್ದ ರವಿಕುಮಾರ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ರವಿಕುಮಾರ್ ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story