ಸಚಿವ ಜೆ.ಸಿ.ಮಾಧುಸ್ವಾಮಿಗೆ ಕೊರೋನ ಪಾಸಿಟಿವ್: ಆಸ್ಪತ್ರೆಗೆ ದಾಖಲು
ತುಮಕೂರು,ಸೆ.28: ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ರವಿವಾರ ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಧುಸ್ವಾಮಿ ಅಧಿವೇಶನ ಮುಗಿದ ಬಳಿಕ ತಮ್ಮ ಗಂಟಲ ದ್ರವ ಟೆಸ್ಟ್ ಮಾಡಿಸಿದ್ದರು. ರವಿವಾರ ಸಂಜೆ ಬಂದ ವರದಿಯಲ್ಲಿ ಸಚಿವರಿಗೆ ಕೊರೋನ ಪಾಸಿಟಿವ್ ಎಂದು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಹಳೆ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಆರೋಗ್ಯ ಕುರಿತಂತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ತಿಳಿಸಿದ್ದಾರೆ.
Next Story