ಪವರ್ ಟಿವಿ ವಾಹಿನಿ ಲೈವ್ ಬಂದ್ ಕ್ರಮ ಸರಿಯಲ್ಲ : ಶಿವಾನಂದ ತಗಡೂರು
ಪತ್ರಕರ್ತರ ಸಂಘದ ಅಧ್ಯಕ್ಷರಿಂದ ಸಿಎಂ ಬಿಎಸ್ ವೈಗೆ ಮನವಿ
ಶಿವಾನಂದ ತಗಡೂರು
ಬೆಂಗಳೂರು : ಪವರ್ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮ ಅಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಕ್ಷೇಪಿಸಿದ್ದಾರೆ.
ಟಿವಿ ಮಾಲಕರ ವಿರುದ್ಧ ಇರುವ ಆರೋಪ ಬೇರೆ ವಿಚಾರ. ತನಿಖೆ ನಡೆಸುವುದಕ್ಕೆ ಅಭ್ಯಂತರವಿಲ್ಲ ಎಂದು ಅವರು ಸ್ಪಷ್ಟಣೆ ನೀಡಿದ್ದಾರೆ.
ಆದರೆ, ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುದರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ ಎಂದು ಅವರು ತಿಳಿಸಿದ್ದಾರೆ.
ಆದುದರಿಂದ ತಾವು ಈ ಕೂಡಲೇ ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಶಿವಾನಂದ ತಗಡೂರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
Next Story