ಬೆಂಗಳೂರು-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ರೈಲು ತಾತ್ಕಾಲಿಕ ಸ್ಥಗಿತ
ಸಾಂದರ್ಭಿಕ ಚಿತ್ರ
ಬೆಂಗಳೂರು ಅ.6: ಬೆಂಗಳೂರು ಹಾಗೂ ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕೊರೋನ ಸಂದರ್ಭದಲ್ಲಿ ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಅಕ್ಟೋಬರ್ 7ರಿಂದ ಸಂಚಾರ ಸ್ಥಗಿತವಾಗಲಿದೆ.
ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚಾರ ನಡೆಸುತ್ತಿತ್ತು. ವಿಶೇಷ ರೈಲಿನ ಜೊತೆಗೆ ವಾರದಲ್ಲಿ ಮೂರು ಬಾರಿ ಸಂಚಾರ ಮಾಡುತ್ತಿದ್ದ ಕೆಎಸ್ಆರ್ ರೈಲು ವೇಳಾಪಟ್ಟಿಯಲ್ಲಿಯೂ ಬದಲಾವಣೆಯಾಗಿದೆ. ವಾರದಲ್ಲಿ ಬುಧವಾರ, ಶುಕ್ರವಾರ, ರವಿವಾರ ಸಂಚಾರ ನಡೆಸಲಿದೆ. ಅಕ್ಟೋಬರ್ 7ರಿಂದ ಬದಲಾವಣೆಯಾಗಲಿದೆ. ಕೊರೋನ ಸಂದರ್ಭದಲ್ಲಿ ರಾಜ್ಯದಲ್ಲಿ ರೈಲು, ರಸ್ತೆ ಸಾರಿಗೆಯಲ್ಲಿ ಭಾರೀ ಬದಲಾವಣೆಯಾಗಿತ್ತು. ಹಲವು ಸೇವೆಗಳು ಬದಲಾಗಿದ್ದವು.
Next Story