ಸಿಬಿಐ ಬಿಜೆಪಿಯ ಬೀದಿ ನಾಯಿ: ದಿನೇಶ್ ಗುಂಡೂರಾವ್
ಬೆಂಗಳೂರು, ಅ.6: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್, ಸಿಬಿಐ ಬಿಜೆಪಿ ಪಕ್ಷದ ಬೀದಿ ನಾಯಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಅವರು, ಕೇಂದ್ರದ ತನಿಖಾ ಸಂಸ್ಥೆಗಳಾದ ಇಡಿ, ಐಟಿ ಮತ್ತು ಸಿಬಿಐ ಸಂವಿಧಾನದ ಕಾವಲು ನಾಯಿಗಳಾಗಿ ಉಳಿದಿಲ್ಲ. ಬದಲಿಗೆ ಬಿಜೆಪಿ ಪಕ್ಷದ ಬಾಗಿಲು ಕಾಯುವ ಬೀದಿ ನಾಯಿಗಳಾಗಿವೆ ಎಂದು ತಿಳಿಸಿದ್ದಾರೆ.
ಪ್ರತಿ ಚುನಾವಣೆ ಸಂದರ್ಭದಲ್ಲಿ ಎದುರಾಳಿ ಪಕ್ಷದವರ ಮೇಲೆ ದಾಳಿ ಮಾಡುವಂತೆ ಇವುಗಳಿಗೆ ತರಬೇತಿ ನೀಡಲಾಗಿದೆ. ಈ ಕೆಲಸವನ್ನು ಇವುಗಳು ಅಚ್ಚುಕಟ್ಟಾಗಿ ನಿರ್ವಹಿಸಿ ಬಿಜೆಪಿಗೆ ತಮ್ಮ ನಿಯತ್ತು ತೋರಿಸುತ್ತಿವೆ ಎಂದು ಗುಂಡೂರಾವ್ ಕಿಡಿಕಾರಿದ್ದಾರೆ.
Next Story