ಹತ್ರಸ್ ಘಟನೆ ಉ.ಪ್ರ. ಸರಕಾರಕ್ಕೆ ಸಂಬಂಧಿಸಿದ್ದು, ಪ್ರಧಾನಿ ಯಾಕೆ ಮಾತನಾಡಬೇಕು: ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ
ಮೈಸೂರು,ಅ.8: ಉತ್ತರ ಪ್ರದೇಶದ ಹತ್ರಸ್ನ ದಲಿತಯ ಯುವತಿಯ ಹತ್ಯೆ ಪ್ರಕರಣ ಉತ್ತರ ಪ್ರದೇಶ ಸರ್ಕಾರಕ್ಕೆ ಸೇರಿದ್ದು, ಇದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾಕೆ ಮಾತನಾಡಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಶ್ನಿಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿ ನಂತರ 'ವಾರ್ತಾಭಾರತಿ'ಯೊಂದಿಗೆ ಮಾತನಾಡಿದರು.
ಉತ್ತರ ಪ್ರದೇಶದ ಹತ್ರಸ್ನ ಘಟನೆ ಕುರಿತು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಮಾತನ್ನು ಆಡಿಲ್ಲ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಉತ್ತರ ಪ್ರದೇಶ ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟಿದ್ದು, ಅಲ್ಲಿನ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಅಂತಹದರಲ್ಲಿ ಪ್ರಧಾನಿಗಳು ಏಕೆ ಮಾತನಾಡುತ್ತಾರೆ ಎಂದು ಹೇಳಿದರು.
Next Story