ಶಿರಾ ಉಪಚುನಾವಣೆ: ಟಿ.ಬಿ.ಜಯಚಂದ್ರ ಸಾಂಕೇತಿಕ ನಾಮಪತ್ರ ಸಲ್ಲಿಕೆ
ತುಮಕೂರು,ಅ.9: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಚುನಾವಣಾಧಿಕಾರಿಗಳಾದ ಮಧುಗಿರಿ ಉಪವಿಭಾಗಾಧಿಕಾರಿಗಳಾದ ಡಾ.ನಂದಿನಿದೇವಿ ಅವರಿಗೆ ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆ ಪತ್ರ ಸಲ್ಲಿಸಿದ್ದು, ಅಕ್ಟೋಬರ್ 15 ರಂದು ಮತ್ತೊಮ್ಮೆ ಪಕ್ಷದ ಮುಖಂಡರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಚುನಾವಣೆಗೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ನಾಮಪತ್ರ ಸಲ್ಲಿಸಲು ಆಕ್ಟೋಬರ್ 16 ರಂದು ಕೊನೆಯ ದಿನವಾಗಿದ್ದು, 17 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.19 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 3 ರಂದು ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಮತ ಎಣಿಕೆ ನಡೆಯಲಿದೆ.
Next Story