ಸಂಪುಟದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ: ಆರೋಗ್ಯ ಇಲಾಖೆ ಹೊಣೆ ಸುಧಾಕರ್ ಹೆಗಲಿಗೆ ?
ಬೆಂಗಳೂರು, ಅ.11: ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಆರೋಗ್ಯ ಮತ್ತು ಕುಟುಂಬ ಸಚಿವ ಬಿ.ಶ್ರೀರಾಮುಲು ಅವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ.
ಬಿ.ಶ್ರೀರಾಮುಲು ಅವರು ಈಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿದ್ದು, ಆದರೆ ಅವರ ಖಾತೆ ಬದಲಾವಣೆ ಮಾಡಿ ಸಮಾಜ ಕಲ್ಯಾಣ ಖಾತೆ ನೀಡುವ ಸಾಧ್ಯತೆ ಇದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಡಾ.ಕೆ.ಸುಧಾಕರ್ ಅವರಿಗೆ ನೀಡುವ ಬಗ್ಗೆ ಮೂಲಗಳು ಮಾಹಿತಿ ನೀಡಿದ್ದು, ಜೊತೆಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ ಅವರ ಹೆಸರು ಕೂಡಾ ಆರೋಗ್ಯ ಇಲಾಖೆಗಾಗಿ ಕೇಳಿಬರುತ್ತಿವೆ.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಬಳಿ ಇದ್ದ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಪೈಕಿ ಸಮಾಜ ಕಲ್ಯಾಣ ಇಲಾಖೆ ಹಿಂಪಡೆದು ರಾಮುಲು ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದ್ದು, ಆದರೆ ಈ ಕುರಿತು ನಾಳೆ(ಅ.12) ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಗಳಿವೆ.
Next Story