ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ 'ಬಿ' ಫಾರಂ ವಿತರಣೆ
ಬೆಂಗಳೂರು, ಅ. 11: ತುಮಕೂರು ಜಿಲ್ಲೆ ಶಿರಾ ಕ್ಷೇತ್ರ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ(ಆರ್.ಆರ್.ನಗರ) ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಟಿ.ಬಿ.ಜಯಚಂದ್ರ ಹಾಗೂ ಕುಸುಮಾ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ 'ಬಿ' ಫಾರಂ ವಿತರಣೆ ಮಾಡಿದರು.
ನ.14ಕ್ಕೆ ಶಿರಾ ಕ್ಷೇತ್ರದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಅ.15ರಂದು ಆರ್ಆರ್ ನಗರ ಕ್ಷೇತ್ರದಲ್ಲಿ ಕುಸುಮಾ ಅವರು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಆ ಹಿನ್ನೆಲೆಯಲ್ಲಿ ಇಬ್ಬರು ಅಭ್ಯರ್ಥಿಗಳಿಗೆ ಶಿವಕುಮಾರ್ ಬಿ ಫಾರಂ ವಿತರಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವೆ ಉಮಾಶ್ರೀ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಮೇಯರ್ಗಳಾದ ಪದ್ಮಾವತಿ, ಗಂಗಾಬಿಕೆ ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಹಾಜರಿದ್ದರು.
Next Story