ಕೊರೋನ ನಿಯಂತ್ರಣದಲ್ಲಿ ವೈಫಲ್ಯಕ್ಕೆ ಸಚಿವರ ಖಾತೆ ಬದಲಾವಣೆಯೇ ಸಾಕ್ಷಿ: ಡಿ.ಕೆ.ಶಿವಕುಮಾರ್
ಬೆಂಗಳೂರು, ಅ.12: ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸುವಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ವಿಫಲವಾಗಿರುವುದಕ್ಕೆ ಆರೋಗ್ಯ ಸಚಿವರ ಖಾತೆ ಬದಲಾವಣೆಯೆ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಆರೋಗ್ಯ ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಸರಕಾರ ಈ ಸೋಂಕು ತಡೆಯುವಲ್ಲಿ ವಿಫಲವಾಗಿರುವುದು ಇದಕ್ಕೆ ಸ್ಪಷ್ಟ ನಿದರ್ಶನ. ಇದೇ ಕಾರಣಕ್ಕೆ ಸಂಪುಟ ಸರ್ಜರಿ ನಡೆಸಲಾಗಿದೆ. ಸರಕಾರದ ಈ ಅಸಮರ್ಥತೆಯಿಂದ ಜನರ ಜೀವ ಹಾನಿಯಾಗಿದೆ ಎಂದು ಆರೋಪಿಸಿದ್ದಾರೆ.
Next Story