ಹೊಟ್ಟೆಕಿಚ್ಚಿನಿಂದ ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಟ್ಟಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು, ಅ.22: ಹೊಟ್ಟೆಕಿಚ್ಚಿನಿಂದ ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಟ್ಟಿಲ್ಲ ಎಂದು ಶಾಸಕ ದಿನೇಶ್ ಗುಂಡೂರಾವ್ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಅವರು, ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರಕಾರ ಅನುದಾನ ನೀಡದಿರುವುದು ಹೊಟ್ಟೆ ಕಿಚ್ಚಿನ ರಾಜಕಾರಣ ಎಂದಿದ್ದಾರೆ.
ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು ಬಿಜೆಪಿಗೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ ಅನುದಾನ ಬಿಡುಗಡೆ ಮಾಡಲಿ ಎಂದು ಒತ್ತಾಯ ಮಾಡಿದ್ದಾರೆ.
Next Story