ಶಿವಮೊಗ್ಗ : ಕಾಡಾನೆ ದಾಳಿಗೆ 'ರಂಗ' ಬಲಿ
ಶಿವಮೊಗ್ಗ : ಕಾಡಾನೆ ದಾಳಿಗೆ ಸಕ್ರೆಬೈಲು ಆನೆ ಬಿಡಾರದ ಆನೆ ರಂಗ (35) ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ನಿನ್ನೆ ತಡರಾತ್ರಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದಾಗ ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಕಾಡಾನೆಯ ತಿವಿತಕ್ಕೆ ಬಲಿಯಾಗಿದೆ.
ಸಕ್ರೆಬೈಲಿನ ಜಂಗಲ್ ರೆಸಾರ್ಟ್ ನಿಂದ ಮೂರು ಕಿ.ಮೀ. ದೂರದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಇದರಿಂದ ರಂಗ ಆನೆ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಸಕ್ರೆಬೈಲು ಕ್ಯಾಂಪ್ ನಲ್ಲಿ ಹುಟ್ಟಿದ ಆನೆ ರಂಗ ತನ್ನ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿತ್ತು. ರಂಗ ಗೀತಾ ಆನೆಯ ಮರಿ. ಸ್ಥಳಕ್ಕೆ ಅರಣ್ಯಾಧಿಕಾರಿ ಮತ್ತು ವೈದರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Next Story