ಶೈಕ್ಷಣಿಕ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು, ಅ.27: ಸರಕಾರದ ಕಾರ್ಮಿಕ ಕಲ್ಯಾಣ ಮಂಡಳಿಯು ಕಾರ್ಮಿಕ ಮಕ್ಕಳ 2020-20 ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಡಿ.15 ರಂದು ಕೊನೆಯ ದಿನಂಕವಾಗಿದ್ದು, 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ, ಐಟಿಐ, ಪದವಿ, ಸ್ನಾತಕೋತ್ತರ ಹಾಗೂ ಇತರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ www.klwb.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ ಕಾರ್ಮಿಕ ಆಯುಕ್ತರ ಕಚೇರಿ, ಕಾರ್ಮಿಕ ಕಲ್ಯಾಣ ಭವನ, 2 ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ದೂ: 080-23570266 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story