ಮಾಜಿ ಡಿಸಿಎಂ ಪರಮೇಶ್ವರ್ ಹೆಸರಿನಲ್ಲಿ ವಂಚನೆ: ಮಹಿಳೆಯ ಬಂಧನ
ಬೆಂಗಳೂರು, ಅ.31: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೆಸರಿನಲ್ಲಿ ವಂಚನೆ ಮಾಡಿರುವ ಆರೋಪದಡಿ ಮಹಿಳೆಯೊಬ್ಬಾಕೆಯನ್ನು ಇಲ್ಲಿನ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಜ್ಞಾನಗಂಗಾ ಬಡಾವಣೆಯ ಪಲ್ಲವಿ(32) ಎಂಬಾಕೆ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತನ್ನ ಚಿಕ್ಕಪ್ಪ ಎಂದು ಹೇಳಿಕೊಂಡು ವಿದ್ಯಾವಂತ ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿ ಅವರಿಗೆ ಸ್ವಯಂ ಉದ್ಯೋಗ ಸ್ಥಾಪನೆಗೆ ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ 10 ಲಕ್ಷ ಸಾಲ ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದು ವಂಚಿಸಿರುವುದಾಗಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Next Story