ನಾನೂ ಕೂಡಾ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದ ಶಾಸಕ ತನ್ವೀರ್ ಸೇಠ್
ಮೈಸೂರು,ನ.1: ಮುಖ್ಯಮಂತ್ರಿ ಸ್ಥಾನಕ್ಕೆ ನಾನೂ ಒಬ್ಬ ಆಕಾಂಕ್ಷಿ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಆಕ್ಷಾಂಕ್ಷಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ನಾನೂ ಆಕಾಂಕ್ಷಿ. ನನ್ನ ಆಸೆ ಈಡೇರುವುದು ಮುಖ್ಯವಲ್ಲ, ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಮುಖ್ಯ ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಕಿ-ಸಂಖ್ಯೆ ಮುಖ್ಯ, ಸಂಖ್ಯೆ ಇದ್ದರೆ ನಾನೇ ಮುಖ್ಯಮಂತ್ರಿಯಾಗಬಹುದು. ಮುಖ್ಯಮಂತ್ರಿ ಆಗೋ ಅರ್ಹತೆಯನ್ನು ನಾನು ಹೊಂದಿದ್ದೇನೆ ಎಂದರು.
ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಅದಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಝಮೀರ್ ಅಹಮದ್ ಪಕ್ಷದ ಸಿದ್ಧಾಂತವನ್ನು ತಿಳಿದುಕೊಂಡಿಲ್ಲ, ಮುಖ್ಯಮಂತ್ರಿ ವಿಚಾರವನ್ನು ಈಗ ಮಾತನಾಡುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.
Next Story