ನ.23ರಂದು ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ
ಬೆಂಗಳೂರು, ನ.4: ಅರಣ್ಯ ಇಲಾಖೆಯಲ್ಲಿ 3 ವರ್ಷಗಳ ಹಿಂದೆಯೆ ಘೋಷಣೆಯಾಗಿದ್ದ ಪ್ರದಾನವಾಗದೇ ಉಳಿದುಕೊಂಡು ಬಂದಿದ್ದ ‘ಮುಖ್ಯಮಂತ್ರಿಗಳ ಚಿನ್ನದ ಪದಕ’ ಸಮಾರಂಭಕ್ಕೆ ದಿನಾಂಕ ನಿಗದಿಯಾಗಿದೆ.
ಅರಣ್ಯ ಸಚಿವ ಆನಂದ ಸಿಂಗ್ ಅಧಿಕಾರ ಸ್ವೀಕರಿಸಿದ ಕೆಲವೇ ತಿಂಗಳಲ್ಲಿ ಈ ಪದಕ ಪ್ರದಾನ ಮಾಡಿಸಲು ಮಾರ್ಚ್ ತಿಂಗಳಲ್ಲಿ ಮುಖ್ಯಮಂತ್ರಿ ಜತೆ ಸಮಾಲೋಚಿಸಿ ದಿನಾಂಕ ನಿಗದಿಪಡಿಸಿದ್ದರು. ಆದರೆ, ಕೋವಿಡ್ ಲಾಕ್ ಡೌನ್ ಘೋಷಣೆಯಾದ ಕಾರಣ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು. ಈಗ ಅರಣ್ಯ ಸಚಿವರು ಪುನಃ ಮುಖ್ಯಮಂತ್ರಿ ಜತೆ ಸಮಾಲೋಚಿಸಿ ದಿನಾಂಕ ನಿಗದಿಪಡಿಸಿದ್ದಾರೆ.
ಇದೇ ತಿಂಗಳು ಅಂದರೆ ನವೆಂಬರ್ 23ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ "ಮುಖ್ಯಮಂತ್ರಿಗಳ ಚಿನ್ನದ ಪದಕ" ವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story