ತುಳು, ಕೊಡವ, ಉರ್ದು ಭಾಷಿಕರಿಗೆ ಪ್ರಾಧಿಕಾರ ರಚನೆಗೆ ಬಿ.ಕೆ ಹರಿಪ್ರಸಾದ್ ಒತ್ತಾಯ
ಬೆಂಗಳೂರು: ಪ್ರಾಧಿಕಾರ ಸ್ಥಾಪನೆ ಮಾಡುವುದಾದರೆ, ಉರ್ದು, ಕೊಡವ, ತುಳು ನಿಗಮವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ರಾಜ್ಯ ಸರ್ಕಾರ ಮರಾಠಿಗರಿಗೆ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿರುವುದನ್ನ ಬಿ.ಕೆ ಹರಿಪ್ರಸಾದ್ ಖಂಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾತಿಗೊಂದು ಪ್ರಾಧಿಕಾರ ಸ್ಥಾಪನೆ ಮಾಡಿ, ಸಮುದಾಯವನ್ನು ಒಡೆಯುವ ಕೆಲಸ ಬಿಜೆಪಿ ನಾಯಕರಿಗೆ ಹೊಸದೇನಲ್ಲ. ಆರೆಸ್ಸೆಸ್ ನಾಯಕರು ಬಿಜೆಪಿ ನಾಯಕರಿಂದ ಜಾತಿ ಒಡೆಯುವ ಕೆಲಸ ಮಾಡಿಸುತ್ತಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದರು.
Next Story