ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು
ಕೋಲಾರ, ನ.20: ಪ್ರೇಮಿಗಳಿಬ್ಬರು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುಗಿಲಬೆಲೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಮಾದಮಂಗಲ ಗ್ರಾಮದ ಸುರೇಶ್ (28), ಕಾರಹಳ್ಳಿ ರೂಪ (26) ಮೃತ ಪ್ರೇಮಿಗಳಾಗಿದ್ದು, ರೂಪಾಗೆ ಕಳೆದ ಎರಡು ತಿಂಗಳ ಹಿಂದೆಯಷ್ಟೆ ಮತ್ತೊರ್ವನೊಂದಿಗೆ ವಿವಾಹವಾಗಿತ್ತು. ಆದರೆ ರೂಪಾಗೆ ಇಷ್ಟವಿಲ್ಲದಿದ್ದರೂ ಪೋಷಕರು ಮದುವೆ ಮಾಡಿದ್ದರು ಎನ್ನಲಾಗುತ್ತಿದ್ದು, ಇದೇ ಕಾರಣಕ್ಕೆ ರೂಪ ತನ್ನ ಪ್ರಿಯಕರ ಸುರೇಶ್ ಜೊತೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಇಬ್ಬರೂ ವೇಲ್ ನಲ್ಲಿ ಸುತ್ತಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ
ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.
Next Story