ದೇಶದ್ರೋಹಿ ಗುಪ್ಕಾರ್ ಗ್ಯಾಂಗ್ ಜತೆ ಕಾಂಗ್ರೆಸ್ ಕೈ ಜೋಡಿಸಿದೆ: ಪ್ರಹ್ಲಾದ್ ಜೋಶಿ ಆರೋಪ
ಧಾರವಾಡ, ನ.21: ದೇಹದ್ರೋಹಿ ಚಟಿವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ. ಈ ಗ್ಯಾಂಗ್ ಜೊತೆಗಿರುವ ಪಕ್ಷಗಳ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾರುಕ್ ಅಬ್ದುಲ್ಲಾ ಹಾಗೂ ಶೇಕ್ ಅಬ್ದುಲ್ಲಾ ಅವರು ಭಾರತದ ಹಿತವನ್ನು ಕಾಪಾಡದೇ ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಇತ್ತ ಗಡಿ ಖ್ಯಾತೆ ತೆಗೆಯುವ ಚೀನಾದವರಿಗೆ ಮೋದಿ ತಕ್ಕ ಪಾಠವನ್ನು ಕಲಿಸುತ್ತಿದ್ದಾರೆ. ದೇಶದ ಬಗ್ಗೆ ಆತ್ಮಾಭಿಮಾನ ಇದ್ದವರು ಮೊದಲು ಚೀನಾ ಕ್ಯಾತೆಯನ್ನು ವಿರೋಧ ಮಾಡಬೇಕು ಎಂದು ದೇಶದಲ್ಲಿ ಈ ಹಿಂದೆ ನೀಡಲಾಗಿದ್ದ ಪಶಸ್ತಿಗಳನ್ನು ವಾಪಸ್ ಕೊಟ್ಟಿರುವವರು ಎಲ್ಲಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.
ದೇಶವನ್ನು ಹಾಳು ಮಾಡುತ್ತಾ ಹೋಗುತ್ತಿರುವ ಕಾಂಗ್ರೆಸ್ ಪಕ್ಷ ಗುಪ್ಕಾರ್ ಜೊತೆಗೆ ಸೇರಿದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹತ್ಯೆಗಳು ಆಗುತ್ತಿವೆ. 130ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಕೊಂದು ಹಾಕಲಾಗಿದೆ ಎಂದು ಆರೋಪಿಸಿದರು.