ಹಸಿರು ಪಟಾಕಿ ಮಾರಾಟ ನಿಯಮ ಉಲ್ಲಂಘನೆ: ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ
ಬೆಂಗಳೂರು, ನ.24: ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಮಾರಾಟ ಮಾಡಲಾಗಿದೆಯೇ ಎಂದು ಪ್ರಶ್ನಿಸಿರುವ ಹೈಕೋರ್ಟ್, ನಿಯಮ ಉಲ್ಲಂಘಿಸಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರಕಾರ ಮತ್ತು ಬಿಬಿಎಂಪಿಗೆ ಸೂಚಿಸಿದೆ.
ಕೊರೋನ ಸೋಂಕು ಇರುವ ಕಾರಣ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ನಗರದ ಚಾರ್ಟರ್ಡ್ ಅಕೌಂಟೆಂಟ್ ಡಾ. ಎ.ಎಸ್. ವಿಷ್ಣು ಭರತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಮಾರಾಟ ಮಾಡಲಾಗಿದೆಯೇ ಎಂಬುದರ ಕುರಿತು ಸ್ಪಷ್ಟನೆ ನೀಡಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.
Next Story