ಜನ್ನಾಪುರ: ಮನೆ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಶಿವಮೊಗ್ಗ, ನ.26: ಮನೆಯಲ್ಲಿ ಯಾರು ಇರದ ವೇಳೆ ಮನೆ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, 20 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾದ ಘಟನೆ ನಡೆದಿದೆ.
ಭದ್ರಾವತಿಯ ಜನ್ನಾಪುರದ ಕುರುಬರ ಬೀದಿಯ ಕೆ.ಸಿ.ರಾಮಚಂದ್ರ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಪತ್ನಿಯ ಚಿಕಿತ್ಸೆಗಾಗಿ ರಾಮಚಂದ್ರ ಅವರು ಬೆಂಗಳೂರಿಗೆ ತೆರಳಿದ್ದರು. ಹಿಂದಿರುಗಿ ಬಂದಾಗ ಈ ಕಳವು ನಡೆದಿರುವುದು ಬೆಳಕಿಗೆ ಬಂದಿದೆ.
ಮನೆಯ ಕೊಠಡಿಯಲ್ಲಿದ್ದ ಬೀರುವಿನ ಇಂಟರ್ ಲಾಕ್ ಮುರಿದಿರುವ ಕಳ್ಳರು 20 ಸಾವಿರ ರೂ. ನಗದನ್ನು ದೋಚಿದ್ದಾರೆ. ಮತ್ತೊಂದು ಕೊಠಡಿಯಲ್ಲಿದ್ದ ಬೀರುವಿನ ಬಾಗಿಲು ಮುರಿದು 30 ಗ್ರಾಂ ಬಂಗಾರದ ಬಳೆ,15 ಸಾವಿರ ರೂ. ಮೌಲ್ಯದ ಬಂಗಾರದ ಸರ,10 ಗ್ರಾಂನ ಉಂಗುರ ಕದ್ದೊಯ್ದಿದ್ದಾರೆ.
ಪ್ರಕರಣ ಸಂಬಂಧ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story