ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ
ಮೈಸೂರು,ನ.26: ಕೊರೋನ ಸಂಕಷ್ಟದಿಂದ ಸಾಲ ತೀರಿಸಲಾಗದೆ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕುವೆಂಪುನಗರದ ಸಿ ಮತ್ತು ಎಫ್ ಬ್ಲಾಕ್ ನಲ್ಲಿ ನಡೆದಿದೆ.
ಮೃತರನ್ನು ಮಹೇಶ್ (36)ಎಂದು ಗುರುತಿಸಲಾಗಿದೆ. ಇವರು ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದರು. ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಸಾಲಗಾರರ ಕಾಟ ತಡೆಯಲಾರದೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story