ಬಳ್ಳಾರಿ ಜಿಲ್ಲೆ ಈಸ್ಟ್, ವೆಸ್ಟ್ ಜರ್ಮನಿಯಂತೆ ಮತ್ತೆ ಒಂದಾಗಲಿದೆ ಎಂದ ಶಾಸಕ ಸೋಮಶೇಖರರೆಡ್ಡಿ
ಬಳ್ಳಾರಿ, ನ.28: ಅಖಂಡ ಬಳ್ಳಾರಿ ಜಿಲ್ಲೆ ಮತ್ತೆ ಒಂದಾಗಲಿದೆ. ಈಸ್ಟ್, ವೆಸ್ಟ್ ಜರ್ಮನಿ ಹೇಗೆ ಒಂದಾಯ್ತು ಅದೇ ರೀತಿ ಬಳ್ಳಾರಿ ಮತ್ತೆ ಒಂದಾಗಬಹುದು ಎಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ಭವಿಷ್ಯ ನುಡಿದಿದ್ದಾರೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಬಳ್ಳಾರಿ ಜಿಲ್ಲೆ ಇಬ್ಭಾಗಿಸಿರುವುದು ಈ ಸರಕಾರದ ತರಾತುರಿ ನಿರ್ಧಾರ. ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸದೆ ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಲಾಗಿದೆ. ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತೆ ಎಂದು ಹೇಳಿದರು.
ನೂತನ ವಿಜಯನಗರ ಜಿಲ್ಲೆ ಘೋಷಣೆ ವಿರೋಧಿ ಹೋರಾಟದ ಕುರಿತು ಚರ್ಚಿಸುವ ಸಲುವಾಗಿ ರಾಜಕೀಯ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವೆ. ಸಭೆ ನಡೆಸಿದ ಬಳಿಕ ಸಿಎಂ ಭೇಟಿಯಾಗಲಿದ್ದೇನೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಏಕಪಕ್ಷಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕು ಎನ್ನುವುದು ನನ್ನ ಮತ್ತು ಎಲ್ಲಾ ಶಾಸಕರ ಅಭಿಪ್ರಾಯವಾಗಿದೆ ಎಂದು ತಿಳಿಸಿದರು.