ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರಕಾರ ಅಧಿಕೃತ ಆದೇಶ
ಬೆಂಗಳೂರು, ನ. 30: ಕನ್ನಡ ಸಂಘಟನೆಗಳ ತೀವ್ರ ವಿರೋಧದ ನಡುವೆ ರಾಜ್ಯದಲ್ಲಿರುವ ಮರಾಠ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿಗೆ ‘ಮರಾಠ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಲು ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಸದರಿ ನಿಗಮಕ್ಕೆ 50 ಕೋಟಿ ರೂ.ಅನುದಾನವನ್ನು ನೀಡಲಾಗಿದೆ. ಸದರಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 3 ಬಿ ಅಡಿಯಲ್ಲಿ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಪಿ.ಕೆ.ಶ್ರೀಪತಿ ಆದೇಶ ಹೊರಡಿಸಿದ್ದಾರೆ.
Next Story