ಗ್ರಾಮ ಪಂಚಾಯತ್ ಚುನಾವಣೆ: ಮಂಗಳಮುಖಿ ಪ್ರಫುಲ್ಲಾದೇವಿ ಸ್ಪರ್ಧೆ
ಮಂಡ್ಯ, ಡಿ.13: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆ(ಮಂಗಳಮುಖಿ) ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದಾರೆ.
ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆ ಪ್ರಫುಲ್ಲಾದೇವಿ, ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಸಾಮಾನ್ಯ ಮಹಿಳೆ ಮೀಸಲು ಸ್ಥಾನದಿಂದ ಪ್ರಫುಲ್ಲದೇವಿ ಕಣಕ್ಕಿಳಿದಿದ್ದಾರೆ.
ಪ್ರಫುಲ್ಲಾದೇವಿ ಕೀಲಾರ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಒಕ್ಕೂಟ ಅಧ್ಯಕ್ಷೆಯಾಗಿ, ಸಮಗ್ರ ಕೀಲಾರ ಗ್ರಾಮಾಭಿವೃದ್ಧಿ ಟ್ರಸ್ಟ್ ಸಂಘಟನಾ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.
Next Story