ಪ್ರಧಾನಿ ಮೋದಿ ಭಾಷಣದ ವೇಳೆ ನಿದ್ದೆಗೆ ಜಾರಿದ ಸಿಎಂ ಬಿಎಸ್ವೈ, ಸಚಿವರು !
ಬೆಂಗಳೂರು, ಡಿ.25: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಪ್ರಮುಖರು ನಿದ್ದೆಗೆ ಜಾರಿದ ದೃಶ್ಯ ಕಂಡುಬಂದಿತು.
ಶುಕ್ರವಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆ ಅಡಿ ರೈತರ ಖಾತೆಗೆ ಹಣ ವರ್ಗಾವಣೆ ಹಾಗೂ 6 ರಾಜ್ಯಗಳ ರೈತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.
ಬಳಿಕ ದೇಶದ ರೈತರನ್ನು ಉದ್ದೇಶಿಸಿ ಮಾತನಾಡುವ ಪ್ರಧಾನಿಗಳ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ, ಗೋವಿಂದ ಕಾರಜೋಳ ಅವರು ಪ್ರಧಾನಿಗಳ ಭಾಷಣ ಆಲಿಸುತ್ತಾ ವೇದಿಕೆಯಲ್ಲೇ ನಿದ್ದೆಗೆ ಜಾರಿದ್ದರು.
Next Story