ಯೋಗೇಶಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜ.20ಕ್ಕೆ ಮುಂದೂಡಿಕೆ
ಧಾರವಾಡ, ಜ.13: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜ.20ರವರೆಗೆ ಮುಂದೂಡಿಕೆ ಮಾಡಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ನ್ಯಾಯಪೀಠ, ವಿಚಾರಣೆಯನ್ನು ಜ.20ಕ್ಕೆ ಮುಂದೂಡಿತು.
ಈಗಾಗಲೇ ವಿನಯ ಕುಲಕರ್ಣಿ ಕಳೆದ ಎರಡು ತಿಂಗಳಿನಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ. ಧಾರವಾಡದ ಸಿಬಿಐ ವಿಶೇಷ ಕೋರ್ಟ್ನಲ್ಲಿ ವಿನಯ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಆ ಹಿನ್ನೆಲೆಯಲ್ಲಿ ವಿನಯ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು.
Next Story