ಕೃಷಿ ಕಾಯ್ದೆ ಹಿಂಪಡೆಯುವವರೆಗೂ ರೈತರ ಹೋರಾಟ ನಿಲ್ಲುವುದಿಲ್ಲ: ಕುರುಬೂರು ಶಾಂತಕುಮಾರ್
ಮೈಸೂರು,ಜ.24: ಕೃಷಿ ಕಾಯ್ದೆ ಹಿಂಪಡೆಯುವವರೆಗೂ ರೈತರ ಹೋರಾಟ ನಿಲ್ಲುವುದಿಲ್ಲ. ಜ.26 ಗಣರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ 25 ಸಾವಿರ ಟ್ರ್ಯಾಕ್ಟರ್ ಸೇರಿದಂತೆ ಇತರೆ ವಾಹನಗಳ ಪೆರೇಡ್ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಕಾಯ್ದೆ ಹಿಂಪಡೆಯುವವರೆಗೆ ನಮ್ಮ ಚಳುವಳಿ ಮುಂದುವರಿಯುತ್ತದೆ. ಗಣರಾಜ್ಯೋತ್ಸವ ದಿನ ದಿಲ್ಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ ಮುಗಿದ ಮೇಲೆ ಮತ್ತು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಂದೇಶ ಮುಗಿದ ನಂತರ ಬೃಹತ್ ಮಟ್ಟದಲ್ಲಿ ಟ್ರ್ಯಾಕ್ಟರ್, ಜೀಪ್, ಬೈಕ್ ಸೇರಿದಂತೆ 25 ಸಾವಿರಕ್ಕೂ ಹೆಚ್ಚು ವಾಹನಗಳ ಮೂಲಕ ಪರೇಡ್ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆ ಈಡೇರಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದರು.
Next Story