ಶಿವಮೊಗ್ಗ: ದುಷ್ಕರ್ಮಿಗಳ ತಂಡದಿಂದ ಚೂರಿ ಇರಿತ; ಯುವಕ ಮೃತ್ಯು
ಶಿವಮೊಗ್ಗ : ದುಷ್ಕರ್ಮಿಗಳ ತಂಡವೊಂದು ಇಬ್ಬರು ಯುವಕರ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಇರಿದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಎನ್ಟಿ ರಸ್ತೆಯ ಸಮೀಪ ನಿನ್ನೆ ತಡ ರಾತ್ರಿ ನಡೆದಿದೆ.
ಕೆಆರ್ ಪುರಂ ನಿವಾಸಿ ಜೀವನ್ ಮೃತರು ಎಂದು ಗುರುತಿಸಲಾಗಿದ್ದು, ಸಿಗೇಹಟ್ಟಿಯ ಕೇಶವ್ ಗಂಭೀರವಾಗಿ ಗಾಯಗೊಂಡಿ ದ್ದಾರೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎನ್ಟಿ ರಸ್ತೆಯ ಲಾಡ್ಜ್ ಸಮೀತ ತಡರಾತ್ರಿ ಈ ಘಟನೆ ಸಂಭವಿಸಿದೆ. ಕ್ಷುಲಕ ವಿಚಾರಕ್ಕೆ ಚಾಕು ಇರಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story