ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಫೆ.1: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾರ್ಚ್ ತಿಂಗಳಲ್ಲಿ ರಾಜ್ಯ ಮಟ್ಟದ ಮೂರು ದಿನಗಳ ‘ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ’ವನ್ನು ನಡೆಸಲು ಉದ್ದೇಶಿಸಿದ್ದು, ಆಸಕ್ತ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನಾಂಕವಾಗಿದ್ದು, 20 ರಿಂದ 40 ವರ್ಷ ವಯೋಮಿತಿಯುಳ್ಳ ದೇಶದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಸಾಹಿತ್ಯ ಅಕಾಡೆಮಿಯ ಅಧಿಕೃತ ವೆಬ್ಸೈಟ್ http://karnatakasahithyaacademy.org ನಿಂದ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
Next Story