ಮೀಸಲಾತಿಗಾಗಿ ಹೋರಾಡುತ್ತಿರುವ ಸಮುದಾಯಗಳಿಗೆ ನ್ಯಾಯ ಒದಗಿಸುತ್ತೇವೆ: ಸಿಎಂ ಯಡಿಯೂರಪ್ಪ
ಮೈಸೂರು, ಫೆ.13: ಮೀಸಲಾತಿಗಾಗಿ ಹೋರಾಟ ಮಾಡುತ್ತಿರುವ ಎಲ್ಲಾ ಸಮುದಾಯದವರಿಗೂ ನ್ಯಾಯ ಒದಗಿಸಬೇಕಾಗಿರುವುದು ಮುಖ್ಯಮಂತ್ರಿಯ ಕರ್ತವ್ಯ. ಹಾಗಾಗಿ ಎಲ್ಲಾ ಸಮುದಾಯದವರಿಗೂ ನ್ಯಾಯ ಒದಗಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಖಾಸಗಿ ಕಾರ್ಯಕ್ರದ ನಿಮಿತ್ತ ಶನಿವಾರ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪಂಚಮ ಸಾಲಿ ಲಿಂಗಾಯತ ಇರಬಹುದು, ಕುರುಬರ ಎಸ್ಟಿ ಮೀಸಲಾತಿ ಸೇರಿದಂತೆ ಕೆಲವು ಸಮುದಾಯದವರು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದಾರೆ. ಈ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಸವಾಲುಗಳು ಎಂದರೆ ನನಗೆ ಖುಷಿ, ಮತ್ತಷ್ಟು ಸವಾಲುಗಳು ಎದುರಾದರೆ ಹುಮ್ಮಸ್ಸಿನಿಂದ ಕೆಲಸ ಮಾಡಲು ಸಾಧ್ಯ. ಮೀಸಲಾತಿ ಸೇರಿದಂತೆ ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಸಂತೋಷದಿಂದ ಬಗೆಹರಿಸುತ್ತೇನೆ ಎಂದು ಹೇಳಿದರು.
ಬಜೆಟ್ ಸಂಬಂಧ ಈಗಾಗಲೇ ಅಧಿಕಾರಿಗಳೊಂದಿಗೆ ಪೂರ್ವಬಾವಿ ಸಬೆ ನಡೆಸಲಾಗಿದೆ. ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ.
ನಮ್ಮ ಮತ್ತು ನಮ್ಮ ಸರ್ಕಾರವನ್ನು ಟೀಕೆ ಮಾಡುವವರಿಗೆ ಬಜೆಟ್ ನಿಂದಲೇ ಉತ್ತರ ಕೊಡುವುದಾಗಿ ಹೇಳಿದರು.