ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣ: ಸಾಕ್ಷ್ಯನಾಶ ಕೇಸ್ ಬೆಂಗಳೂರಿಗೆ ವರ್ಗ
ವಿನಯ ಕುಲಕರ್ಣಿ
ಧಾರವಾಡ, ಫೆ.15: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮಾಜಿ ಸಚಿವ ವಿನಯ ಕುಲಕರ್ಣಿ ಮೇಲಿನ ಸಾಕ್ಷ್ಯನಾಶ ಕೇಸ್ ಬೆಂಗಳೂರಿಗೆ ವರ್ಗಾವಣೆಯಾಗಿದೆ.
ಧಾರವಾಡದ ಪ್ರಧಾನ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿದ್ದ ಕೇಸನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ಗೆ ವರ್ಗಾವಣೆ ಮಾಡಿ, ಧಾರವಾಡ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.
ಇದರಿಂದ ವಿನಯ ಪರ ವಕೀಲರ ಮನವಿಗೆ ಮಾನ್ಯತೆ ಲಭಿಸಿದಂತಾಗಿದೆ. ಕಳೆದ ವಾರ ಸಿಬಿಐ ನ್ಯಾಯಾಲಯದ ಕೇಸ್ ಕೂಡ ವರ್ಗಾವಣೆಯಾಗಿತ್ತು. ಇದೀಗ ಸಾಕ್ಷ್ಯನಾಶ ಕೇಸ್ ಸೇರಿ ಎರಡೂ ಕೇಸ್ ಜನಪ್ರತಿನಿಧಿಗಳ ಕೋರ್ಟ್ಗೆ ವರ್ಗಗೊಂಡಿವೆ. ನ.5ರಂದು ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐನಿಂದ ಬಂಧನಕ್ಕೊಳಗಾಗಿದ್ದರು. ಸದ್ಯ ವಿನಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.
Next Story