ಸಿದ್ದರಾಮಯ್ಯ ರಾಮಮಂದಿರ ಕಟ್ಟುವುದಕ್ಕೆ ದೇಣಿಗೆ ನೀಡಿದ್ದಾರೆ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ರಾಮಮಂದಿರ ಕಟ್ಟುವುದಕ್ಕೆ ದೇಣಿಗೆ ನೀಡಿದ್ದಾರೆ. ಬಹಿರಂಗವಾಗಿ ಹೇಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು ನೀಡಿದರು.
ನಗರದಲ್ಲಿ ಸೋಮವಾರ ಮಾಧ್ಯನದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಹ ರಾಮಮಂದಿರ ಕಟ್ಟಲು ದೇಣಿಗೆ ನೀಡಿದ್ದಾರೆ. ಆದರೆ ಬಹಿರಂಗವಾಗಿ ಹೇಳಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೆ ಮಾತನಾಡಲು ಬೇರೆ ವಿಚಾರ ಸಿಗುತ್ತಿಲ್ಲ, ಹಾಗಾಗಿ ರಾಮಮಂದಿರದ ವಿಚಾರ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಮಮಂದಿರ ನಿರ್ಮಾಣಕ್ಕೆ ಯಾರೂ ಸಹ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ, ಸ್ವತಹ ಜನರೇ ನೀಡಿತ್ತಿದ್ದಾರೆ. ಒಂದೊಂದು ಪೈಸೆಯೂ ಸಹ ರಾಮಮಂದಿರಕ್ಕೆ ಉಪಯೋಗವಾಗಲಿದೆ ಎಂದರು.
ಹಣ ಸಂಗ್ರಹ ಮಾಡಿರುವುದು ಯಾವುದೇ ಕಾರಣಕ್ಕೂ ದುರುಪಯೋಗವಾಗುವುದಿಲ್ಲ, ಯಾರೂ ಬೇಕಾದರೂ ಲೆಕ್ಕ ಪಡೆದುಕೊಳ್ಳಬಹುದು ಎಂದು ಹೇಳಿದರು.
Next Story