ಚಿಕ್ಕಬಳ್ಳಾಪುರದಲ್ಲಿ ಸ್ಫೋಟ: ಘಟನಾ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ
ಚಿಕ್ಕಬಳ್ಳಾಪುರ: ಇಂದು ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಮೃತಪಟ್ಟ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮಾಹಿತಿ ಪಡೆದರು.
ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಹಾಗು ಜಿಲ್ಲಾ ರಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ ಕ್ವಾರಿ ಮಾಲಕರ ವಿರುದ್ದ ಐಪಿಸಿ 302 ಕೇಸನ್ನು ದಾಖಲಿಸಬೇಕೆಂದು ತಿಳಿಸಿದರು. ಇತ್ತೀಚೆಗೆ ಕ್ರಷರ್ ಗಳ ಮೇಲೆ ದಾಳಿ ನಡೆದಿದ್ದರೂ ಸಹ ಇವರ ಬಳಿ ಜಿಲೆಟಿನ್ ಬಂದಿದ್ದಾದರೂ ಎಲ್ಲಿಂದ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಸಿದ್ದರಾಮಯ್ಯನವರೊಂದಿಗೆ ಶಾಸಕರಾದ ವಿ.ಮುನಿಯಪ್ಪ, ಶಿವಶಂಕರ್ ರೆಡ್ಡಿ, ಸುಬ್ಬಾರೆಡ್ಡಿ, ಡಿಸಿಸಿ ಅಧ್ಯಕ್ಷ ಕೇಶವ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.
Next Story