ವಿಜಯನಗರ ಜಿಲ್ಲಾ ಮೇಲುಸ್ತುವಾರಿಯಾಗಿ ರಜನೀಶ್ ಗೋಯಲ್ ನೇಮಕ
ಬೆಂಗಳೂರು, ಫೆ.28: ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ವಿರೋಧದ ನಡುವೆಯೂ ನೂತನ ವಿಜಯನಗರ ಜಿಲ್ಲೆ ರಚನೆ ಮೇಲುಸ್ತುವಾರಿಯಾಗಿ ಐಎಎಸ್ ಅಧಿಕಾರಿ ಡಾ. ರಜನೀಶ್ ಗೋಯಲ್ ಮತ್ತು ಜಿಲ್ಲೆ ವಿಶೇಷಾಧಿಕಾರಿಯಾಗಿ ಅನಿರುದ್ಧ್ ಅವರನ್ನು ನೇಮಕ ಮಾಡಲಾಗಿದೆ.
ಸರಕಾರದ ಮಟ್ಟದಲ್ಲಿ ವಿಜಯನಗರ ಆರಂಭಕ್ಕೆ ಎಲ್ಲ ತಯಾರಿ ನಡೆದಿದ್ದು, ಈ ನಡುವೆ ಜಿಲ್ಲಾ ಮೇಲುಸ್ತುವಾರಿಯಾಗಿ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಹಾಗೂ ಅನಿರುದ್ಧ್ ಶ್ರವಣ್ ಅವರನ್ನು ವಿಶೇಷಾಧಿಕಾರಿಯಾಗಿ ರಾಜ್ಯಪಾಲರ ಅನುಮತಿ ಮೇರೆಗೆ ಸರಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ವಿಜಯನಗರ ಜಿಲ್ಲೆ ರಚನೆಯಾಗಿದ್ದು, ಸರಕಾರಿ ಕಾರ್ಯಗಳನ್ನು ಆರಂಭಿಸಲು ಹುದ್ದೆಗಳ ವಿವರ ನಿಗದಿಪಡಿಸಿ ಅಗತ್ಯವಿರುವ ಕಟ್ಟಡ ಹಾಗೂ ಸಾಮಗ್ರಿಗಳನ್ನು ವ್ಯವಸ್ಥೆಗೊಳಿಸಲು ಮುಂದಾಗಿದ್ದಾರೆ.
ರಾಜ್ಯ ಸರಕಾರ ಯಾವುದೇ ಪೂರ್ವಾಪರ ಯೋಚಿಸದೆ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದ್ದಾರೆ ಎಂದು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಆರೋಪಿಸುತ್ತಿದೆ.
Next Story