ಯಡಿಯೂರಪ್ಪ ಮಂಡಿಸಲಿರುವ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ: ಕುಮಾರಸ್ವಾಮಿ
ಮೈಸೂರು,ಮಾ.7: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ಮಂಡಿಸಲಿರುವ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಖಜಾನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರಿದು ಮಾಡಿದ್ದಾರೆ. ಅವರು ಮಂಡಿಸುವ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಳ್ಳಲು ಆಗುವುದಿಲ್ಲ ಎಂದರು.
ಇದೇ ವೇಳೆ ಕೋರ್ಟ್ ಮೊರೆ ಹೋಗಿರುವ ಸಚಿವರ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ನಗೆಪಾಟಲಿನ ಘಟನೆಗಳು ನಡೆಯುತ್ತಿದೆ. ಯಾರಿಗೆ ಯಾರು ಬುದ್ಧಿ ಹೇಳುತ್ತಾರೊ, ಯಾರು ಯಾರಿಗೆ ಸಲಹೆ ನೀಡುತ್ತಾರೋ ಗೊತ್ತಿಲ್ಲ, ಇದೆಲ್ಲ ನೋಡಿದಾದ ರಾಜ್ಯ ಇಂತಹ ಪರಿಸ್ಥಿತಿಗೆ ಬಂತಲ್ಲ ಎಂದು ಜನ ಯೋಚಿಸುವಂತಾಗಿದೆ ಎಂದು ಹೇಳಿದರು.
Next Story