ವಿರಾಜಪೇಟೆ: ಓಮ್ನಿ ಮೇಲೆ ಕಾಡಾನೆ ದಾಳಿ; ಪ್ರಯಾಣಿಕರು ಅಪಾಯದಿಂದ ಪಾರು
ಮಡಿಕೇರಿ, ಮಾ.14: ವಿರಾಜಪೇಟೆ ತಾಲೂಕಿನ ಕರಡ ಗ್ರಾಮದಲ್ಲಿ ಕಾಡಾನೆಯೊಂದು ಓಮ್ನಿ ವಾಹನದ ಮೇಲೆ ದಾಳಿ ಮಾಡಿದ್ದು, ಅದೃಷ್ಟವಶಾತ್ ವಾಹನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಮೇಚುರ ಅಶೋಕ್ ಎಂಬವರಿಗೆ ಸೇರಿದ ವಾಹನದ ಮೇಲೆ ದಾಳಿಯಾಗಿದ್ದು, ಕಾರಿನಲ್ಲಿದ್ದ ಐವರು ದಾಳಿ ಸಂದರ್ಭ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಆದರೆ ವಾಹನ ನಜ್ಜುಗುಜ್ಜಾಗಿದ್ದು, ವಾಹನಲ್ಲಿದ್ದವರು ಹಾಗೂ ಸ್ಥಳೀಯರು ಜೋರಾಗಿ ಕಿರುಚಿಕೊಂಡಾಗ ಆನೆ ಕಾಲ್ಕಿತ್ತಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದಲ್ಲಿ ಆತಂಕದ ವಾತಾವರಣವಿದ್ದು, ತಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Next Story