ಬೆಳಗಾವಿ: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಮುಖ್ಯ ಇಂಜಿನಿಯರ್
ಬೆಳಗಾವಿ, ಮಾ.18: ಕಾಮಗಾರಿಯ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಸಂದರ್ಭ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯ ಮುಖ್ಯ ಇಂಜಿನಿಯರ್ ಗುರುವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಚೇರಿಯಲ್ಲಿ ತಾಂತ್ರಿಕ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದನಾಯ್ಕ ದೊಡ್ಡಬಸಪ್ಪ ಎಸಿಬಿ ಬಲೆಗೆ ಬಿದ್ದಿದ್ದು, ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಂಪನಿಯಿಂದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ವಹಿಸಿದ ನಗರ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯ ಬಿಲ್ ಮಂಜೂರು ಮಾಡಲು ಸಿದ್ದನಾಯ್ಕ, ಹಿಂದಿನ ಬಿಲ್ನಲ್ಲಿ ಶೇ 0.5ರಷ್ಟು ಅಂದರೆ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ನೀಡಲಾಗಿದ್ದ ದೂರಿನ್ವಯ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಎಸಿಬಿ ತಿಳಿಸಿದೆ.
ಇನ್ನು, ಆರೋಪಿ ಮನೆಯಲ್ಲಿ ಒಟ್ಟು 23.56 ಲಕ್ಷ ಅಕ್ರಮ ನಗದು ಪತ್ತೆಯಾಗಿದೆ. ಅವರನ್ನು ವಶಕ್ಕೆ ಪಡೆದು ಪ್ರಕರಣದ ತನಿಖೆ ಮುಂದುವರಿಸಲಾಗಿದೆ ಎಂದು ಎಸಿಬಿ ಹೇಳಿದೆ.
Next Story