ನನ್ನನ್ನೂ ಸೇರಿ ನಾಲ್ವರು ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್
ಬೆಂಗಳೂರು, ಮಾ.21: ನನ್ನನ್ನೂ ಸೇರಿ ನಾಲ್ವರು ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಹಿರಿಯ ಸಾಹಿತಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ.
ರವಿವಾರ ನಗರದ ಆರ್.ವಿ.ಇಂಜಿನಿಯರಿಂಗ್ ಕಾಲೇಜಿನ ಪೂರ್ಣಿಮಾ ಪ್ಯಾಲೇಸ್ನ ದೇವಂಹಾಲ್ನಲ್ಲಿ ಪ್ರತಿಷ್ಠಾನ ಆಯೋಜಿಸಿದ್ದ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಸಾರ್ವಜನಿಕ ಜೀವನದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್, ಖಾಸಗಿ ಚಾನೆಲ್ನ ರಂಗನಾಥ್ ಹಾಗೂ ನನ್ನನ್ನೂ ಸೇರಿದಂತೆ ಪ್ರಮುಖರನ್ನು ಮೇ 1ರಂದು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದ್ದು, ಅದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.
Next Story