ಬೈಕ್ಗೆ ಸಾರಿಗೆ ಬಸ್ ಢಿಕ್ಕಿ: ಮುಖ್ಯ ಪೇದೆ ಮೃತ್ಯು
ಮಂಡ್ಯ, ಮಾ.28: ಬೈಕ್ಗೆ ಸಾರಿಗೆ ಬಸ್ ಢಿಕ್ಕಿಯಾಗಿ ಮುಖ್ಯಪೇದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಸರಾಳು ಸಮೀಪದ ಕೋಡಿಕೊಪ್ಪಲು ಗೇಟ್ ಬಳಿ ರವಿವಾರ ಬೆಳಗ್ಗೆ ನಡೆದಿದೆ.
ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿರುವ ಮಂಡ್ಯ ನಗರ ನಿವಾಸಿ ವೆಂಕಟೇಶ್(50) ಸಾವನ್ನಪ್ಪಿದವರು. ಇವರು ಚುಂಚನಗಿರಿಯಲ್ಲಿ ಕರ್ತವ್ಯ ಮುಗಿಸಿಕೊಂಡು ಮಂಡ್ಯಕ್ಕೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಈ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story